Sunday, June 23, 2013

"ಮಾನಸಿಕ ನೆಮ್ಮದಿಗೆ 'ಕ್ಷಾಂತಿ' ಎನ್ನುವ ಮದ್ದು !!!! "

ನೆಮ್ಮದಿಯಾಗಿ ಬದುಕಲಿಕ್ಕೆ ಏನು ಬೇಕು?ನಮ್ಮಲ್ಲಿ ಬಹಳಷ್ಟು ಜನ ಯಾಕೆ ಅಶಾಂತಿಯಿಂದ ,ಅದರಿಂದ ಉಂಟಾಗುವ ದೈಹಿಕ ತೊಂದರೆಗಳಿಂದ ಜೀವನವಿಡೀ ಕಳೆಯುತ್ತೇವೆ?ನೆಮ್ಮದಿ ಅನ್ನುವುದು ಮನಸ್ಸಿಗೆ ಸಂಭಂದಿಸಿದ ಸಂಗತಿ ಎನ್ನುವುದು ಸರಳ ತಿಳಿವಳಿಕೆ. ಹಾಗಿದ್ದೂ ನಮ್ಮ ಆದ್ಯತೆ ದೈಹಿಕ ಅಗತ್ಯಗಳ ಪೂರೈಕೆಯತ್ತಲೇ ಇರುತ್ತದೆ. ಹಾಗಾಗಿ ನೆಮ್ಮದಿ ಎನ್ನುವುದು ನಮಗೆಲ್ಲಾ ಮರೀಚಿಕೆಯಾಗಿದೆ.

ಈ ವಿಷಯದ ಬಗ್ಗೆ ಬೆಳಕು ಚೆಲ್ಲುವ, ಚೇತನಾ ತೀರ್ಥಹಳ್ಳಿಯವರು ಬರೆದ "ಆತ್ಮ ಕಾಂತಿಗೆ ಕ್ಷಾಂತಿ"ಎನ್ನುವ ಸುಂದರ ಲೇಖನ ನೆನ್ನೆಯ ವಿಜಯ ಕರ್ನಾಟಕದ 'ಬೋಧಿ ವೃಕ್ಷ'ದಲ್ಲಿ ಪ್ರಕಟವಾಗಿದೆ. ಸಾಧ್ಯವಾದರೆ ಪೂರ್ತಿ ಲೇಖನ ಓದಿ. ಆ ಲೇಖನದಲ್ಲಿ ಬರುವ "ಕ್ಷಾಂತಿ"ಎನ್ನುವ ಪದದ ಬಗ್ಗೆ ನನಗೆ ಗೊತ್ತಿರಲಿಲ್ಲ. ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.

ಪರಿಪೂರ್ಣತೆಯ ಪಥಿಕರ ಲಕ್ಷಣ ಗಳಲ್ಲಿ "ಕ್ಷಾಂತಿ"ಯೂ ಒಂದು . ಇದು ಅಪರೂಪದ ,ಆದರೆ ಮುಖ್ಯವಾದ ಗುಣ . ಬೌದ್ಧ ಧರ್ಮದಲ್ಲಿ ಇದಕ್ಕೆ ಹೆಚ್ಚಿನ ಒತ್ತು  ಕೊಡಲಾಗಿದೆ. ಕ್ಷಾಂತಿ ಎಂದರೆ ಕ್ಷಮಿಸುವ ಧೈರ್ಯ. ಇದು ಕೇವಲ ಕ್ಷಮಿಸುವ ಗುಣವಲ್ಲ.
ಆ ಗುಣದ ಮೂಲ ಬೀಜ . ಕ್ಷಾಂತಿ ಎಂದರೆ ಯಾವುದರಿಂದಲೂ  ಬಾಧೆಗೆ ಒಳಗಾಗದಿರುವ ಮನಸ್ಥಿತಿ !!! ಯಾವುದರಿಂದಲೂ ಹಿಮ್ಮೆಟ್ಟದೇ ದೃಢವಾಗಿ ನಿಲ್ಲುವ ಗುಣ . ಇದು ಸಹನೆ,ತಾಳ್ಮೆ ,ಧೈರ್ಯ,ದೃಢತೆ ಹಾಗೂ ಕ್ಷಮಾ ಗುಣ ಗಳ ಪ್ಯಾಕೇಜ್ ಇದ್ದಂತೆ !!! ಮೋಕ್ಷದ ಹಾದಿಯಲ್ಲಿ ಮಾತ್ರವಲ್ಲ ,ಅನು ದಿನದ ಬದುಕಿನಲ್ಲೂ "ಕ್ಷಾಂತಿ"ಯು ದಿವ್ಯ ಮಂತ್ರ ವಾಗ ಬಲ್ಲದು . ಇಂತಹ ಮನಃಸ್ಥಿತಿ ಅದ್ಭುತ ಅಲ್ಲವೇ!!!ಇದು ಸಾಧ್ಯವಾಗುವಂತಿದ್ದರೆ ಎಂತಹ ನೆಮ್ಮದಿ ಸಿಗಬಹುದು!!!! YOU JUST DON'T GET UPSET!!! YOU ARE  STRESS HARDY!!! JUST IMAGINE !!!

ಬದುಕಿನ ಓಟದಲ್ಲಿ ಎದುರಾಗುವ ದ್ವೇಷ ,ಅಸೂಯೆ ,ಕೋಪ,ಸಂಕುಚಿತ ಬುದ್ಧಿ ,ಈ ಎಲ್ಲದಕ್ಕೂ "ಕ್ಷಾಂತಿ"ಯು ಮದ್ದಾಗ ಬಲ್ಲದು. ನಮ್ಮೆಲ್ಲಾ ಸಮಸ್ಯೆಗಳ ಮೂಲ ಕಾರಣಕ್ಕೆ ಪರಿಹಾರ ಆಗ ಬಲ್ಲದು. ಪೂರ್ಣ ಲೇಖನವನ್ನು ತಪ್ಪದೇ ಓದಿ. ಕ್ಷಾಂತಿ ಎಂಬ ದಿವ್ಯ ಗುಣ ನಮ್ಮೆಲ್ಲರ ಆತ್ಮಕ್ಕೆ ಹೆಚ್ಚಿನ ಕಾಂತಿಯನ್ನು ನೀಡಲಿ.ಎಲ್ಲರಿಗೂ ನಮಸ್ಕಾರ.

2 comments:

  1. "ಕ್ಷಾಂತಿ" ನನಗೂ ಹೊಸ ಪದವೇ.
    ಹೊರಗಿನ ಗದ್ದಲವನ್ನು ದೇಹದ ಹೊರಗೇ ಶುದ್ಧಿ ಮಾಡುವ ಕ್ರಿಯೆ ಸುಲಭದಲ್ಲ. ಒಳಗಿನ ಗದ್ದಲ ಮನೋ ಕುಸಿತಕ್ಕೆ ಕಾರಣವಾಗಿದ್ದೆ ಎಂಬ ಅರಿವು ನನಗಿಲ್ಲ!
    ನಾನು ಇನ್ನೂ ಬೌದ್ಧ ಧರ್ಮವನ್ನು ತುಸು ಓದಿಕೊಳ್ಳಬೇಕಿದೆ. ಚೇತನಾ ಮೇಡಂ ಮತ್ತು ನೆನಪಿಸಿದ ನಿಮಗೂ ಧನ್ಯವಾದಗಳು.

    ReplyDelete
  2. ಒಳ್ಳೆಯ ಒದೊಂದನ್ನ ಕೊಟ್ಟ ನಿಮಗೆ ಧನ್ಯವಾದಗಳು ಸಾರ್

    ReplyDelete

Note: Only a member of this blog may post a comment.